Share News

ಬೆಂಗಳೂರು: ರೈಲು ಮಾರ್ಗದ ಮೂಲಕ ಅಸ್ಸಾಂನಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

​ಅಸ್ಸಾಂ ಮೂಲದ ಹೀರಾಲಾಲ್ ಕಾನು ಬಂಧಿತ ಆರೋಪಿ. ನಗರದ ಓಕಳಿಪುರಂ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಆಧರಿಸಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

​ದಾಳಿಯ ವೇಳೆ ಆರೋಪಿಯಿಂದ ₹5.31 ಲಕ್ಷ ಮೌಲ್ಯದ 6.255 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್ಪಿ ಅಬೂಬಕ್ಕರ್ ಮುಜಾವರ್ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

​ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಜಾಲದ ಹಿನ್ನೆಲೆ ಹಾಗೂ ಸಾಗಾಟದ ಮೂಲದ ಕುರಿತು ತನಿಖೆ ಮುಂದುವರಿದಿದೆ.


Share News