Share News

ಬೆಂಗಳೂರು: ತನಿಖೆಯ ಸೂಕ್ಷ್ಮತೆಗಳು ಹಾಗೂ ಕಾನೂನುಬದ್ಧ ವಿಚಾರಣಾ ಪ್ರಕ್ರಿಯೆಗಳ ಕುರಿತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ದಿನಾಂಕ 04-09-2026 ರಂದು “Custodial Interrogation & Salient Features of Investigation” ವಿಷಯದ ಮೇರೆಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

​ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಎಂ. ವಿ. ಶ್ರೀಶಾನಂದ ಅವರ ಘನ ಉಪಸ್ಥಿತಿಯಲ್ಲಿ ಹಾಗೂ ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಶ್ರೀ ಸಿ. ವಂಶಿ ಕೃಷ್ಣ (ಐಪಿಎಸ್) ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನ್ಯಾಯಮೂರ್ತಿಗಳು, ವಿಚಾರಣಾ ಸಮಯದಲ್ಲಿ ಅನುಸರಿಸಬೇಕಾದ ಕಾನೂನು ಕ್ರಮಗಳು ಹಾಗೂ ತನಿಖಾ ಹಂತದಲ್ಲಿ ವಹಿಸಬೇಕಾದ ಜಾಗರೂಕತೆಯ ಕುರಿತು ಪ್ರಮುಖ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ನೀಡಿದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನಗಳು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ವೃತ್ತಿಪರ ಕರ್ತವ್ಯ ನಿರ್ವಹಣೆಯಲ್ಲಿ ಅತ್ಯಂತ ಉಪಯುಕ್ತವಾಗಿ ಮೂಡಿಬಂದವು.

​ಕಾರ್ಯಾಗಾರವನ್ನು ಯಶಸ್ವಿಯಾಗಿ ಸಂಘಟಿಸಿದ ವಿ.ವಿ. ಪುರಂ ಕಾನೂನು ಕಾಲೇಜಿನ ಆಡಳಿತ ಮಂಡಳಿಗೆ ಹಾಗೂ ಸಹಕರಿಸಿದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.


Share News