ಕಲಬುರಗಿ: ಸದ್ಭಾವನಾ ದಿನಾಚರಣೆಯ ಅಂಗವಾಗಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಆವರಣದಲ್ಲಿ ಇಂದು ವಿಶೇಷ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀಮತಿ ಶಾಲೂ (ಐಪಿಎಸ್) ಅವರು ಭಾಗವಹಿಸಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲಿಪಿಕ ವರ್ಗದ ನೌಕರರಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೊಲೀಸ್ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಮಾಜದಲ್ಲಿ ಸದ್ಭಾವನೆ, ಏಕತೆ, ಶಾಂತಿ ಮತ್ತು ಪರಸ್ಪರ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ಪ್ರತಿಜ್ಞೆ ಸ್ವೀಕರಿಸಿದರು.
ನಾಡು ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುವ ಮೂಲಕ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA